Sun,Dec07,2025
ಕನ್ನಡ / English

ಅದು ಸಿದ್ದರಾಮಯ್ಯ ಅವರ ಸೊಸೆ/ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ? ಬಿಜೆಪಿ ಕಾರ್ಯಕರ್ತೆ ಬಂಧನ | JANATA NEWS

28 Jul 2023

ಉಡುಪಿ : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನಕ್ಕೊಳಗಾಗಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್‌ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದರು

ಉಡುಪಿ ವಿಚಾರವಾಗಿ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ಉಡುಪಿಯ ಕಾಲೇಜಿನಲ್ಲಿ 'ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ' ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?

ವಿದ್ಯಾರ್ಥಿನಿಯರ ಮಕ್ಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ @BJP4Karnataka ಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ' ಎಂದು ಟ್ವೀಟ್ ಮಾಡಲಾಗಿತ್ತು.

ಈ ಟ್ವೀಟ್​ನಲ್ಲಿ ವಿದ್ಯಾರ್ಥಿನಿಯರ ಮಕ್ಕಳಾಟವನ್ನು, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್​ಗೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ, ಕಾಂಗ್ರೆಸ್​ ಮಾಡಿದ್ದ ಟ್ವೀಟನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದರು.

ಅದರಲ್ಲಿ ಅವರು 'ಇದನ್ನೆ ಸಿದ್ದರಾಮಯ್ಯ ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ.. @siddaramaiahನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಪೋತೀರಾ' ಎಂದು ಸಿಎಂ ವಿರುದ್ಧ ಕಿಡಿಕಾರಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು.

ಹನುಮಂತಯ್ಯ ಎಂಬ ಯುವ ಕಾಂಗ್ರೆಸ್​ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಐಪಿಸಿ ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi video case: If it was Siddaramaiah daughter-in-law/wife, would you say this? BJP worker arrested

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...