Sun,Jul26,2026
ಕನ್ನಡ / English

ಹಿಂದೂ ಮುಖಂಡರ ಮೇಲೆ ಪ್ರಚೋದನಕಾರಿ ಭಾಷಣ ಕೇಸ್; ಹೋರಾಟ ಹತ್ತಿಕ್ಕುವ ಪ್ರಯತ್ನ - ಶಾಸಕ ಸುವರ್ಣ | JANATA NEWS

04 Aug 2023

ಉಡುಪಿ : ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ, ಎಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿರುವ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ಹಾಗೂ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಪೋಲಿಸ್ ಇಲಾಖೆ ಕೆಲಸ ನಿರ್ವಹಿಸುತ್ತಿದ್ದು, ಪ್ರಕರಣದ ಆರಂಭದ ದಿನದಿಂದಲೂ ಸರಕಾರ ನಿರಂತರವಾಗಿ ಪೋಲಿಸ್ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದು ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದೆ. ಉಡುಪಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ಪ್ರಕರಣದ ವಿರುದ್ಧ ಜನಕ್ರೋಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹತಾಶರಾಗಿರುವ ರಾಜ್ಯ ಸರ್ಕಾರ ಪೋಲಿಸ್ ಇಲಾಖೆಯ ಮೂಲಕ ಹಿಂದೂ ಮುಖಂಡರ ಮೇಲೆ ಕೇಸ್ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ. ವೀಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ. ರಾಜ್ಯ ಸರ್ಕಾರ ಜಿಹಾದಿ ಶಕ್ತಿಗಳ ಓಲೈಕೆಗಾಗಿ ಹಿಂದೂ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ್ದು, ಇದರಿಂದ ಯಾವೊಬ್ಬ ಹಿಂದೂ ಕಾರ್ಯಕರ್ತ ಧೃತಿಗೆಡದೆ ಸಂತ್ರಸ್ಥ ವಿದ್ಯಾರ್ಥಿನಿಯರ ರಕ್ಷಣೆಗೆ ಸದಾ ಜೊತೆ ನಿಲ್ಲಲಿದ್ದಾರೆ, ಎಂದು ಯಶಪಾಲ್ ಸುವರ್ಣ ಟ್ವೀಟ್ ಮಾಡಿದ್ದಾರೆ.

English summary : Provocative speech case against Hindu leaders; Efforts to suppress the protest - MLA Suvarna

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...