Sun,Jul26,2026
ಕನ್ನಡ / English

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊದಲ ವಾಣಿಜ್ಯ ದೇಶೀಯ ವಿಮಾನ | JANATA NEWS

31 Aug 2023

ಶಿವಮೊಗ್ಗ : ಮೊದಲ ವಾಣಿಜ್ಯ ದೇಶೀಯ ವಿಮಾನ ಗುರುವಾರ ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಮಾನ ನಿಲ್ದಾಣ ಉದ್ಘಾಟನೆಗೊಂಡು ಸುಮಾರು ಆರು ತಿಂಗಳುಗಳ ಬಳಿಕ ಇಂದು ಶಿವಮೊಗ್ಗದ ಜನರು ಈ ಅವಿಸ್ಮರಣೀಯ ಘಳಿಗೆಗೆ ಸಾಕ್ಷಿಯಾದರು.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ ವಿಮಾನದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಇತರ ನಾಯಕರು ಕಾಣಿಸಿಕೊಂಡಿದ್ದಾರೆ.

ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರು, ನನ್ನ ಜೀವನದ ಒಂದು ಅವಿಸ್ಮರಣೀಯ, ಸಾರ್ಥಕ ಸಂದರ್ಭ! ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷಿತ ಕನಸು ನನಸಾಗಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಧಿಕೃತವಾಗಿ ವಿಮಾನ ಹಾರಾಟ ಇಂದು ಆರಂಭವಾಗಿದೆ. ಇದರಿಂದ ಪ್ರವಾಸೋದ್ಯಮ, ಕೈಗಾರಿಕೋದ್ಯಮ ಸೇರಿದಂತೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮತ್ತು ಮಲೆನಾಡು ಭಾಗದ ಜನರ ಪ್ರಯಾಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ತಮ್ಮ ಭೂಮಿಯನ್ನು ಕೊಟ್ಟು ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಮುಖ ಕಾರಣರಾಗಿರುವ ನಮ್ಮ ರೈತರಿಗೆ ನಾನು ಆಭಾರಿಯಾಗಿದ್ದೇನೆ. ಮೊದಲ ವಿಮಾನದಲ್ಲಿ ಸಚಿವರು, ಜನಪ್ರತಿನಿಧಿಗಳ ಜೊತೆಗೆ ನಮ್ಮ ಜಿಲ್ಲೆಯ ರೈತರೊಂದಿಗೆ ಪ್ರಯಾಣಿಸಿದ್ದು ಸಾರ್ಥಕ ಸಂತಸವನ್ನು ಉಂಟುಮಾಡಿದೆ.

2020ರ ಜೂನ್ 15ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದೆ. ಈ ವರ್ಷದ ಫೆಬ್ರವರಿ 27ರ ನನ್ನ ಜನ್ಮದಿನದಂದೇ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿರವರು ಸುಸಜ್ಜಿತ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದು, ಇಂದು ಅಧಿಕೃತವಾಗಿ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಈ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಹಾಗೂ ವಿಮಾನಯಾನದ ಸೇವೆ, ಸೌಲಭ್ಯಗಳ ಸಾಕಾರದ ನಿಟ್ಟಿನಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಜಿಲ್ಲೆಯ ಜನತೆಯ ಪರವಾಗಿ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಜನಪ್ರತಿನಿಧಿಯಾಗಿ ನಾಡಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಹಾಗೂ ನಾಡಿನ ಜನತೆಗೆ ನಾನು ಸದಾ ಋಣಿ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ ಸಿಗಬೇಕು ಎಂದರೆ ಅದಕ್ಕೆ ಅಭಿವೃದ್ಧಿಯೊಂದೇ ದಾರಿ. ಈ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ಮುಂದುವರಿಯಲಿದೆ., ಎಂದಿದ್ದಾರೆ.

RELATED TOPICS:
English summary : First commercial domestic flight landed at Shimoga airport

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...