Wed,Apr15,2026
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...