Sat,May30,2026
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...