Sun,Jul26,2026
ಕನ್ನಡ / English

ಕಾವೇರಿ ನೀರು ನಿಲ್ಲಿಸದಿದ್ದರೆ, ಸೆ.12ರ ನಂತರ ಕಾವೇರಿ ರಕ್ಷಣಾ ಯಾತ್ರೆ ಆರಂಭ | JANATA NEWS

08 Sep 2023

ಮಂಡ್ಯ : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೇ ಸೆಪ್ಟಂಬರ್ 12 ರ ನಂತರ ಕಾವೇರಿ ಕೊಳ್ಳದ ಜಿಲ್ಲೆಗಳ ಜನರೊಂದಿಗೆ ಸೇರಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಭೇಟಿ ನೀಡಿ ನೀರಿನ ವಸ್ತು ಸ್ಥಿತಿ ಪರಿಶೀಲನೆಯ ನಂತರ ಮಾತನಾಡಿದ ಅವರು, ಈ ವರ್ಷ ಮಳೆ ಕೊರತೆಯಾಗಿರುವುದು ಮೇ, ಜೂನ್ ತಿಂಗಳ ಪ್ರಾರಂಭದಲ್ಲಿಯೇ ಗೊತ್ತಾಗಿದೆ.

ಆದರೂ ಸರ್ಕಾರ ಸಂಪೂರ್ಣವಾಗಿ ಕಾವೇರಿ ವ್ಯಾಪ್ತಿಯ ನಾಲ್ಕು ಡ್ಯಾಮ್ ಗಳ ನಿರ್ವಹಣೆಯಲ್ಲಿ ವಿಫಲವಾಗಿದೆ‌. ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ.

ಕರ್ನಾಟಕ ಸರಕಾರ 5,000 ಕ್ಯುಸೆಕ್ಸ್ ಗಿಂತ ಜಾಸ್ತಿ ನೀರನ್ನು ಬಿಡುತ್ತಿರುವ ಸಂಶಯ ಹುಟ್ಟಿಕೊಂಡಿರುವುದರಿಂದ ಒಳಗಡೆ ಹೋಗಿ ಒಳಹರಿವಿನ ವಿವರ ನೋಡಿದರೆ ಗೊತ್ತಾಗುತ್ತದೆ. ಜಲಾಶಯದಲ್ಲಿನ ವಸ್ತುಸ್ಥಿತಿ ಅರಿಯುವುದು ಮತ್ತು ಮುಂದೆ ಅನಾಹುತ ಆಗದಂತೆ ಸರ್ಕಾರವನ್ನು ಎಚ್ಚರಿಸುವುದು ನಿಯೋಗದ ಉದ್ದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದರು

ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಗಳಿಗೆ ರೈತರ ಹೊಲಗಳಿಗೆ ಜೂನ್ ತಿಂಗಳಲ್ಲಿ ನೀರು ಬಿಡಬೇಕಿತ್ತು. ಐಸಿಸಿ ಮೀಟಿಂಗ್ ಜೂನ್ ನಲ್ಲಿ ಕರೆಯುವ ಬದಲು ಆಗಸ್ಟ್‌ನಲ್ಲಿ ಕರೆದಿದ್ದಾರೆ. ತಮಿಳುನಾಡಿನವರು 15000 ಕ್ಯೂಸೆಕ್ಸ್ ನೀರು ಕೇಳಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಕಾಲ ಹರಣ ಮಾಡಿದೆ ಎಂದು ಆರೋಪಿಸಿದರು.

ತಮಿಳುನಾಡಿನವರು ಕುರುವೈ ಬೆಳೆಗೆ ಈಗಾಗಲೇ 32 ಟಿಎಂಸಿ ಬದಲು 60 ಟಿಎಂಸಿ ನೀರು ಬಳಕೆ ಮಾಡಿಕೊಂಡಿದ್ದಾರೆ. ಆದರೂ ಅವರ ಬೇಡಿಕೆಯಂತೆ ಪ್ರತಿದಿನ ನೀರು ಹರಿಸುತ್ತಿದ್ದಾರೆ. ಈ ಬಗ್ಗೆ ಸರ್ವ ಪಕ್ಷ ಸಭೆಯಲ್ಲೆ ಕೇಳಿದಾಗ ಇನ್ನು ಮುಂದೆ ನೀರು ಬಿಡುವುದಿಲ್ಲ ಅಂತ ಹೇಳಿ, ನಿರಂತರ ನೀರು ಹರಿಸುತ್ತಿದ್ದಾರೆ. ಸಿಡಬ್ಲುಎಂಎ ಎದುರು ಸರಿಯಾಗಿ ವಾದ ಮಾಡಿದ್ದರೆ ಸುಮಾರು 15 ಟಿಎಂಸಿ ನೀರು ಉಳಿಯುತ್ತಿತ್ತು ಎಂದರು.

ರಾಜ್ಯ ಸರ್ಕಾರ ಸೆ. 12 ನೇ ತಾರೀಖಿನ ನಂತರವೂ ನೀರು ಬಿಡುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ವಿಚಾರಣೆ ನಡೆಯುವವರೆಗೂ ನೀರು ಹರಿಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ.

ಮಂಡ್ಯ ಜಿಲ್ಲೆಯೊಂದರಲ್ಲೆ ಸುಮಾರು 4 ಲಕ್ಷ ಎಕರೆ ಬೆಳೆ ಒಣಗುತ್ತಿದೆ. ಕೃಷಿ ಅಧಿಕಾರಿಗಳು ಒಣ ಬೇಸಾಯದ ಬೆಳೆ ಬೆಳೆಯುವಂತೆ ಸೂಚನೆ ನೀಡುತ್ತಿದ್ದಾರೆ. ತಮಿಳುನಾಡಿನ ಬೆಳೆಗೆ ನೀರು ಹರಿಸುತ್ತಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈ ಕಡೆಗೆ ಗಮನ ಹರಿಸಿಲ್ಲ. ಸಿಎಂ ನೀರು ಬಿಡುವುದಿಲ್ಲ ಅಂತ ಹೇಳಿದ ಇಪ್ಪತ್ನಾಲ್ಕು ಗಂಟೆಯಲ್ಲಿ ಆದೇಶ ಇದೆ ನೀರು ಬಿಟ್ಟಿದ್ದೇವೆ ಅಂತ ಡಿಸಿಎಂ ಹೇಳುತ್ತಾರೆ.

ಕೆಆರ್ ಎಸ್ ಡ್ಯಾಮ್ ನಲ್ಲಿ ಕೇವಲ 13 ಟಿಎಂಸಿ ನೀರು ಮಾತ್ರ ಬಳಕೆಗೆ ಇದೆ. ಮುಂದಿನ ಮೇ ವರೆಗೂ ಇನ್ನೂ ಎರಡು ಟಿಎಂಸಿ ನೀರು ಆವಿಯಾಗಿ ಹೋಗುತ್ತದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯದ ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು.

ಕಾಂಗ್ರೆಸ್ ‌ನಾಯಕರ ಹೇಳಿಕೆಗಳನ್ನು ನೋಡಿದರೆ, ತಮಿಳುನಾಡಿನ ಓಲೈಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ಹಿನ್ನೀರು ಸಂಪೂರ್ಣ ಖಾಲಿಯಾಗಿದೆ. ಸರ್ಕಾರ ಇನ್ನೂ ನೀರು ಹರಿಸಿದರೆ ಈ ಪರಿಸ್ಥಿತಿಯಲ್ಲಿ ನಾವು ಕಾವೇರಿ ಮಕ್ಕಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದರು.

RELATED TOPICS:
English summary :If the Cauvery water does not stop, the Cauvery Rescue Yatra will start after September 12

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...