Sun,Jul26,2026
ಕನ್ನಡ / English

ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ | JANATA NEWS

01 Oct 2023

ರಾಮನಗರ : ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಸಂಬಂಧ ಬಿಡದಿಯ ತೋಟದ ಮನೆಯಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಘೋಷಣೆ ಮಾಡಿದರು.

ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು, ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ. ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ಬಗ್ಗೆ ಏನು ಅನ್ಯಾಯ ಆಗಿದೆ, ಅದನ್ನು ನಾನು ಸರಿ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ.

ಜಲಧಾರೆಯಲ್ಲೂ ಇದಕ್ಕೆ ಪರಿಹಾರ ಇದೆ, ಜನರು ಅವಕಾಶ ಕೊಡಲಿಲ್ಲ. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ನೀರಾವರಿ ಅನ್ಯಾಯ ಸರಿ ಮಾಡುವುದೇ ನನ್ನ ಗುರಿ. ಇದೇ ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲಾ ನೀರಾವರಿ ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಮುಸ್ಲಿಂ ಬಾಂಧವರು ಎಚ್ಚರಿಕೆಯಿಂದ ಇರಿ, ಕೆಲ ಕಾಂಗ್ರೆಸ್‌ ನಾಯಕರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಬಾಂಧವರ ಬಗ್ಗೆ ನಮ್ಮ ಕಮಿಟ್‌ಮೆಂಟ್‌ ಏನು ಅಂತ ಎಲ್ಲರಿಗೂ ಗೊತ್ತು. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದಿನ ಒಂದು ತಿಂಗಳ ಒಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಲಿದ್ದೇವೆ. ಪಕ್ಷದ ಮುಖಂಡರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವಾಗುತ್ತೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್‌ ಸಮಸ್ಯೆ ಉಂಟಾಗುವುದಿಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಈ ಬಗ್ಗೆ ಮುಕ್ತವಾಗಿ ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಯಾವ ಮುಖಂಡನ ರಾಜಕೀಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಕೆಲಸದ ಕಡೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I have not used any community for political gain

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...