Sat,May30,2026
ಕನ್ನಡ / English

ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ | JANATA NEWS

01 Oct 2023

ರಾಮನಗರ : ಯಾವ ಸಮುದಾಯವನ್ನು ನಾನು ರಾಜಕೀಯ ಸ್ವರ್ಥಕ್ಕೆ ಬಳಕೆ ಮಾಡಿಕೊಂಡಿಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಸಂಬಂಧ ಬಿಡದಿಯ ತೋಟದ ಮನೆಯಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದು ಘೋಷಣೆ ಮಾಡಿದರು.

ರಾಮನಗರದ ಮಣ್ಣಲ್ಲಿಯೇ ನಾನು ಮಣ್ಣಗೋದು, ಈ ಮಣ್ಣಿನ ಸಾಕ್ಷಿಯಾಗಿ ಹೇಳುತ್ತಿದ್ದೇನೆ. ಈ ನಾಡಿನ ಋಣ ತೀರಿಸುತ್ತೇನೆ. ದೇವೇಗೌಡರ 91ನೇ ವಯಸ್ಸಿನಲ್ಲಿ ಪಕ್ಷಕ್ಕೆ ಏನು ಆಘಾತ ಆಗಿದೆ, ಅದನ್ನು ಅವರು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ಬಗ್ಗೆ ಏನು ಅನ್ಯಾಯ ಆಗಿದೆ, ಅದನ್ನು ನಾನು ಸರಿ ಮಾಡುತ್ತೇನೆ. ಈ ಮೈತ್ರಿಯಿಂದ ರಾಜ್ಯಕ್ಕೆ ಒಳ್ಳೆಯದು ಆಗುತ್ತದೆ. ನಮ್ಮ ನೀರು ಉಳಿಸೋದಕ್ಕೆ ಏನು ಮಾಡಬೇಕು, ಅದನ್ನು ಮಾಡುತ್ತೇನೆ.

ಜಲಧಾರೆಯಲ್ಲೂ ಇದಕ್ಕೆ ಪರಿಹಾರ ಇದೆ, ಜನರು ಅವಕಾಶ ಕೊಡಲಿಲ್ಲ. ಈ ಮೈತ್ರಿಯಿಂದ ಅಧಿಕಾರಕ್ಕೆ ಬರುವುದು ನನ್ನ ಉದ್ದೇಶ ಅಲ್ಲ. ನೀರಾವರಿ ಅನ್ಯಾಯ ಸರಿ ಮಾಡುವುದೇ ನನ್ನ ಗುರಿ. ಇದೇ ಕೇಂದ್ರ ಸರ್ಕಾರದ ನೆರವಿನಿಂದ ಎಲ್ಲಾ ನೀರಾವರಿ ಯೋಜನೆಗಳಿಗೆ ಪರಿಹಾರ ಮಾಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಮುಸ್ಲಿಂ ಬಾಂಧವರು ಎಚ್ಚರಿಕೆಯಿಂದ ಇರಿ, ಕೆಲ ಕಾಂಗ್ರೆಸ್‌ ನಾಯಕರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಮತಕ್ಕಾಗಿ ಒಂದು ಸಮಾಜವನ್ನ ಓಲೈಕೆ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಬಾಂಧವರ ಬಗ್ಗೆ ನಮ್ಮ ಕಮಿಟ್‌ಮೆಂಟ್‌ ಏನು ಅಂತ ಎಲ್ಲರಿಗೂ ಗೊತ್ತು. ಕಳೆದ ಬಾರಿ ಉಂಟಾದ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದಿನ ಒಂದು ತಿಂಗಳ ಒಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಲಿದ್ದೇವೆ. ಪಕ್ಷದ ಮುಖಂಡರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವಾಗುತ್ತೆ. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್‌ ಸಮಸ್ಯೆ ಉಂಟಾಗುವುದಿಲ್ಲ. ಈ ಬಗ್ಗೆ ನಾನು ಭರವಸೆ ಕೊಡುತ್ತೇನೆ. ಈ ಬಗ್ಗೆ ಮುಕ್ತವಾಗಿ ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. ಯಾವ ಮುಖಂಡನ ರಾಜಕೀಯ ಮಸಕು ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲರ ಹಿತ ಕಾಯುವುದು ನಮ್ಮ ಬದ್ಧತೆ. ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಾನು ಪ್ರಾಮಾಣಿಕವಾಗಿ ಈ ಮಾತನ್ನು ಹೇಳುತ್ತಿದ್ದೇನೆ. ಇನ್ನು ಮೇಲೆ ಮಾತನ್ನು ಕಡಿಮೆ ಮಾಡಿ, ಕೆಲಸದ ಕಡೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I have not used any community for political gain

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...