Mon,Jul27,2026
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...